ಇನ್ನೆರಡು ದಿನಗಳಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕ ಕುರಿತು ನಿರ್ಧಾರ

230

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ ನಿಂದಾಗಿ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿದೆ. ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ. ಈಗ 1-ರಿಂದ 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಸಬೇಕಾ ಅಥವ ಮುಂದಿನ ಹಂತಕ್ಕೆ ತೇರ್ಗಡೆ ಮಾಡಬೇಕಾ ಅನ್ನೋದರ ಕುರಿತು ಚರ್ಚೆ ನಡೆದಿದೆ.

ಈ ಬಗ್ಗೆ ಮಾತ್ನಾಡಿರುವ ಶಿಕ್ಷಣ ಸಚಿವ ಸುರೇಶಕುಮಾರ, ಶಿಕ್ಷಣ ತಜ್ಞರು, ವಿವಿಧ ಸಂಘಟನೆಗಳು ಹಾಗೂ ಜನರ ಅಭಿಪ್ರಾಯಗಳನ್ನ ಸಂಗ್ರಹಿಸಿ ಇನ್ನೆರಡು ದಿನಗಳಲ್ಲಿ ಮೌಲ್ಯಾಂಕದ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದಿದ್ದಾರೆ. ಹೀಗಾಗಿ 1-9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಸ್ಪಷ್ಟತೆಗಾಗಿ ಇನ್ನು ಎರಡು ದಿನ ಕಾಯಬೇಕಿದೆ.




Leave a Reply

Your email address will not be published. Required fields are marked *

error: Content is protected !!