Search

ಒಂದೇ ವರ್ಷದಲ್ಲಿ ವಿಜಯಪುರದಲ್ಲಿ ಅಪಘಾತಕ್ಕೆ 403 ಜನರ ಸಾವು

322

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿ ಜಿಲ್ಲೆಯಲ್ಲಿ ಒಂದೇ ಒಂದು ವರ್ಷದಲ್ಲಿ ಅಪಘಾತಕ್ಕೆ ಬಲಿಯಾದವರ ಸಂಖ್ಯೆ ಕೇಳಿದ್ರೆ ಶಾಕ್ ಆಗುತ್ತೆ. ಅಷ್ಟೊಂದು ಜನರು ಸಾವನ್ನಪ್ಪಿದ್ದಾರೆ. 2020ರಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 403 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅನುಪಮ ಅಗರ್ವಾಲ್ ತಿಳಿಸಿದ್ದಾರೆ.

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಪ್ರಯುಕ್ತ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ್ ವರೆಗೂ ಜಾಗೃತಿ ನಡೆಸಲಾಯ್ತು. ಈ ವೇಳೆ ಮಾತ್ನಾಡಿದ ಎಸ್ಪಿ, ಜಿಲ್ಲೆಯಲ್ಲಿ 2020ರಲ್ಲಿ ಸಂಭವಿಸಿದ ಅಪಘಾತದಲ್ಲಿ 403 ಜನರ ಸಾವು, 440 ಜನರಿಗೆ ಗಾಯಗಳಾಗಿವೆ. ಇನ್ನು ದೇಶದಲ್ಲಿ ಬರೋಬ್ಬರಿ 1.5 ಲಕ್ಷ ಜನರು ಅಪಘಾತದಿಂದ ಸಾವನ್ನಪ್ಪುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅತಿ ಹೆಚ್ಚು ಅಪಘಾತವಾಗುವ 20 ವಲಯಗಳನ್ನ 2018ರಲ್ಲೇ ಗುರುತಿಸಲಾಗಿದೆ. ಇದರ ಸಂಖ್ಯೆ ಹೆಚ್ಚಾಗಿದ್ದು, ಸರ್ವೇ ಕಾರ್ಯ ನಡೆದಿದೆ ಎಂದರು. ಹೀಗಾಗಿ ಸಾರ್ವಜನಿಕರ ರಸ್ತೆ ನಿಯಮಗಳನ್ನ ಪಾಲಿಸಬೇಕು. ಹೆಲ್ಮೆಟ್, ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಅಂದಾಗ ಜೀವ ರಕ್ಷಣೆ ಸಾಧ್ಯ ಎಂದರು.




Leave a Reply

Your email address will not be published. Required fields are marked *

error: Content is protected !!