ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಶುಕ್ರವಾರ ತಡರಾತ್ರಿ ನಗರದ ಜಮಖಂಡಿ ರಸ್ತೆಯಲ್ಲಿ, ದಾಖಲೆಯಲ್ಲಿದ 10.30 ಲಕ್ಷ ರೂಪಾಯಿ ಹಾಗೂ 60 ಗ್ರಾಂ ಚಿನ್ನ ವಶ ಪಡಿಸಿಕೊಳ್ಳಲಾಗಿದೆ.
ಗಾಂಧಿಚೌಕ್ ಪೊಲೀಸ್ ಠಾಣೆ ಪಿಎಸ್ಐ ಮುರುಗುಂಡಿ ನೇತೃತ್ವದಲ್ಲಿ ತಪಾಸಣೆ ನಡೆಸಿದಾಗ ಕೆಎ28 ಝಡ್ 8645 ನಂಬರಿನ ಕಾರಿನಲ್ಲಿ ದಾಖಲೆಯಿಲ್ಲದೆ 10.30 ಲಕ್ಷ ರೂಪಾಯಿ ಹಾಗೂ 60 ಗ್ರಾಂ ಸಾಗಿಸುತ್ತಿರುವುದು ಪತ್ತೆಯಾಗಿದೆ. ಈ ಪ್ರಕರಣ ಸಂಬಂಧ ನರೇಂದ್ರ ಅನ್ನೋ ವ್ಯಕ್ತಿಯನ್ನು ಬಂಧಿಸಲಾಗಿದೆ.