ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 7 ಅಲ್ಲ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹುನಗುಂದ ತಾಲೂಕಿನ ಬೆಳಗಲ್ ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಸಿವು ಮುಕ್ತ ರಾಜ್ಯವಾಗಬೇಕು ಅನ್ನೋ ಕಾರಣಕ್ಕೆ ನಾನು ಸಿಎಂ ಆದ್ಮೇಲೆ 7 ಕೆಜಿ ಅಕ್ಕಿ ನೀಡಲಾಯಿತು. ಅದನ್ನೇ ಕೇಂದ್ರ ಸರ್ಕಾರ ಕೊಟ್ಟು ಪುಕ್ಕಟೆ ಪ್ರಚಾರ ಪಡೆಯುತ್ತೆ ಎಂದರು.
ಸ್ವಾತಂತ್ರ್ಯ ಬಂದಾಗ ಆಹಾರ ಸ್ವಾಲಂಬನೆ ಇರಲಿಲ್ಲ. ಇಂದಿರಾ ಗಾಂಧಿ ಸರ್ಕಾರ ಆಹಾರ ಸ್ವಾಲಂಬನೆ ಮಾಡಿದ್ದು. ಬಡವರು, ಕಾರ್ಮಿಕರು, ರೈತರಿಗಾಗಿ ನಾವು ಪ್ರಾರಂಭಿಸಿದ ಇಂದಿರಾ ಕ್ಯಾಂಟೀನ್ ಬೊಮ್ಮಾಯಿ ಅವರೇಕೆ ಬಂದ್ ಮಾಡಿದರು ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತೆ ಎಂದು ಪುಕ್ಕಟೆ ಪ್ರಚಾರ ಪಡೆಯುವ ಬಿಜೆಪಿಯವರು ಗುಜರಾತ್ ಸೇರಿ ಬಿಜೆಪಿ ಆಡಳಿತ ಇರುವ ರಾಜ್ಯದಲ್ಲಿ ಯಾಕೆ ಉಚಿತ ಅಕ್ಕಿ ನೀಡುತ್ತಿಲ್ಲವೆಂದು ಕೇಳಿದರು. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 7 ಅಲ್ಲ 10 ಕೆಜಿ ಉಚಿತ ಅಕ್ಕಿ ನೀಡುತ್ತೇವೆ ಎಂದು ಘೋಷಿಸಿದರು.