‘ನಾವು ಮತ್ತೆ ಅಧಿಕಾರಕ್ಕೆ ಬಂದು 10 ಕೆಜಿ ಅಕ್ಕಿ ಕೊಡ್ತೀವಿ’

246

ಪ್ರಜಾಸ್ತ್ರ ಸುದ್ದಿ

ಮೈಸೂರು: ಮುಂದಿನ ಸಾರಿ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹಿಂದೆ ನಾವು 7 ಕೆಜಿ ಅಕ್ಕಿ ಕೊಡ್ತಿದ್ದೀವಿ. ಅದು ಇದೀಗ 5 ಕೆಜಿ ಮಾಡಿದ್ದಾರಂತೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ನಗರದಲ್ಲಿ ಮಾತ್ನಾಡಿದ ಅವರು, ಬಡವರ ಹೊಟ್ಟೆ ಮೇಲೆ ಹೊಡೆಯುವ ಇವರನ್ನು ಎಷ್ಟು ಸಹಿಸಿಕೊಳ್ಳಬೇಕು. ಇನ್ನು ಎರಡು ವರ್ಷದಲ್ಲಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಆಗ ಎಷ್ಟೇ ಖರ್ಚಾದ್ರೂ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!