ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆದಾಯ ತೆರಿಗೆ ವಂಚನೆ ಸಂಬಂಧ ಇತ್ತೀಚೆಗೆ ಐಟಿ ಅಧಿಕಾರಿಗಳು ನಗರದ ವಿವಿಧ ಉದ್ಯಮಿಗಳು, ಕಂಪನಿಗಳ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದರು. ಇಂದು ಮತ್ತೆ 10 ಕಡೆ ದಾಳಿ ನಡೆಸಲಾಗಿದೆ.
ಸದಾಶಿವನಗರ, ಡಾಲರ್ಸ್ ಕಾಲೋನಿ, ಮಲ್ಲೇಶ್ವರ, ಸರ್ಜಾಪುರ, ಮತ್ತಿಕೆರೆ ಸೇರಿದಂತೆ 10 ಕಡೆ ಚಿನ್ನದ ವ್ಯಾಪಾರಿಗಳ ಅಂಗಡಿ, ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇನ್ನು ಅಕ್ಟೋಬರ್ 10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿರಿಯಾನಿ ಸೆಂಟರ್ ಗಳ ಮೇಲೆ ದಾಳಿ ನಡೆಸಲಾಗಿತ್ತು.