ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಸೋಂಕಿನ ಪ್ರಮಾಣ ಶೇಕಡ 5ಕ್ಕಿಂತ ಕಡಿಮೆ ಇರುವ ಕಾರಣಕ್ಕೆ ಬೆಂಗಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗಿದೆ. ಹೀಗಾಗಿ ಜನಜೀವನ ಎಂದಿನಂತೆ ಶುರುವಾಗಲಿದೆ. ಹೀಗಾಗಿ ಅಪರಾಧ ಚಟುವಟಿಕೆಗಳು ನಡೆಯದಂತೆ ಸಿಲಿಕಾನ್ ಸಿಟಿ ಪೊಲೀಸರು ಕಟ್ಟುನಿಟ್ಟನ ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು ಪೂರ್ವ ವಿಭಾಗದ ಪೊಲೀಸರು 100 ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಮೂರು ಉಪ ವಿಭಾಗದ ಕ್ರಮಿನಲ್ ಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಅಪರಾಧ ಚಟುವಟಿಕೆಗಳಿಂದ ದೂರ ಇರುವಂತೆ ಎಚ್ಚರಿಕೆ ನೀಡಲಾಗಿದೆ.
ಲಾಕ್ ಡೌನ್ ಮುಗಿದಿದೆ, ಹೊರಗೆ ಬಂದು ಏನಬೇಕಾದರೂ ಮಾಡಬಹುದು ಎಂದು ಹೇಳಿ, ಬಾಲ ಏನಾದ್ರೂ ಬಿಚ್ಚಿದ್ರೆ ಪರಿಣಾಮ ಬೇರೆಯಾಗಿರುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ.