ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕರ್ನಾಟಕದಲ್ಲಿ ಬರಗಾಲ ಬಿದ್ದಿದೆ. ತಮಿಳುನಾಡಿನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಆದರೆ, ಕಾವೇರಿ ನೀರು ನಿಯಂತ್ರಣ ಸಮಿತಿ, ಜನವರಿಯಿಂದ ನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಶಿಫಾರಸು ಮಾಡಿದೆ.
ಡಿಸೆಂಬರ್ ಅಂತ್ಯದ ತನಕ 3,128 ಕ್ಯೂಸೆಕ್ ನೀರು ಬಿಡಬೇಕು. ಇದಾದ ಮೇಲೆ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಬಿಡಲು ಕರ್ನಾಟಕಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಬರಗಾಲ ಬಿದ್ದಿದೆ. ತುರ್ತು 12,577 ಕೋಟಿ ರೂಪಾಯಿ ಪರಿಹಾರ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿಯವರಿಗೆ ಮನವಿ ಮಾಡಿದ್ದಾರೆ. ಇತ್ತ ನೋಡಿದರೆ ಮತ್ತೆ ನೀರು ಬಿಡಲು ಹೇಳಲಾಗಿದೆ.