ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ವಿತರಣೆಗೆ ಸಂಬಂಧಿಸಿದಂತೆ ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. 5 ಕೆಜಿ ಅಕ್ಕಿ ಹಾಗೂ 5 ಕೆಜಿ ಬದಲಾಗಿ 170 ರೂಪಾಯಿ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ.
ಮೈಸೂರು, ಕೋಲಾರ ಭಾಗದ ಜನರಿಗೆ 5 ಕೆಜಿ ಅಕ್ಕಿ ಜೊತೆಗೆ ಹಣ ಜಮಾ ಆಗಿದೆ. ಹಂತ ಹಂತವಾಗಿ ಉಳಿದ ಜಿಲ್ಲೆಗಳಿಗೂ ಇದು ಅನ್ವಯವಾಗಲಿದೆ. ರಾಜ್ಯದಲ್ಲಿ 1.08 ಕೋಟಿ ಜನರು ಇದರ ಉಪಯೋಗ ಪಡೆಯಲಿದ್ದಾರೆ. ಅಕ್ಕಿ ಶೇಖರಣೆಗೊಂಡ ನಂತರ 10 ಕೆಜಿ ಅಕ್ಕಿ ವಿತರಿಸಲಾಗುವುದು ಅಂತಾ ಸಚಿವರು ತಿಳಿಸಿದ್ದಾರೆ.