ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಇಂದಿನಿಂದ 1 ರಿಂದ 5ನೇ ತರಗತಿ ಶಾಲೆಗಳು ಪ್ರಾರಂಭವಾಗಿವೆ. ಹೀಗಾಗಿ ಮಕ್ಕಳು ಖುಷಿಯಿಂದ ಶಾಲೆಗೆ ಹೋಗಿದ್ದಾರೆ. ಇದರ ನಡುವೆ ದುರಂತವೊಂದು ಸಂಭವಿಸಿದ್ದು, 11 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಚಂದ್ರಕಟ್ಟೆಯ ಕೆರೆಯಲ್ಲಿ ನಡೆದಿದೆ.
ಕೆಂಪನಹಳ್ಳಿಯ ಸರ್ಕಾರಿ ಶಾಲೆಯ ವಿದ್ಯಾರ್ಥಿ ಸುಹಾಸ್, ಮಧ್ಯಾಹ್ನದ ನಂತರ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಅಗ್ನಿಶಾಮಕ ಸಿಬ್ಬಂದ ಮೃತದೇಹ ಹೊರ ತೆಗೆದಿದ್ದಾರೆ.