13 ಜಿಲ್ಲೆಗಳ 61 ತಾಲೂಕುಗಳು ನೆರೆ ಪೀಡಿತ

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳು ನೆರೆ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈಗ ಆದೇಶ ಹೊರಡಿಸಿರುವ ನೆರೆ ಪೀಡಿತ ತಾಲೂಕುಗಳಿಗೆ ಪರಿಹಾರ ಕಾರ್ಯ ನಡೆಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ.

ಪ್ರವಾಹದಿಂದಾಗಿ ಮನುಷ್ಯರು ಹಾಗೂ ಮೂಕ ಪ್ರಾಣಿಗಳ ಜೀವ ಹಾನಿಯ ಜೊತೆಗೆ ಅಪಾರ ಪ್ರಾಮಣದಲ್ಲಿ ಬೆಳೆ, ಆಸ್ತಿ ಹಾನಿಯಾಗಿದ್ದು, ಸೂಕ್ತ ಪರಿಹಾರ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ.

ದಾವಣಗೆರೆ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಯಾದಗಿರಿ ಸೇರಿ 13 ಜಿಲ್ಲೆಗಳ 61 ತಾಲೂಕುಗಳಲ್ಲಿ ಈ ಬಾರಿ ನೆರೆ ಕಾಣಿಸಿಕೊಂಡಿದೆ. ಈ ಪ್ರದೇಶಗಳಿಗೆ ಪರಿಹಾರ ನೀಡಲು ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!