ಪ್ರಜಾಸ್ತ್ರ ಸದ್ದಿ
ಬೆಂಗಳೂರು: 14 ದಿನ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬಗ್ಗೆ ಮಾತ್ನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ ಎಂದಿದ್ದಾರೆ. ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗುವ ಜನರಿಗಾಗಿ ಆರ್ಥಿಕ ಪ್ಯಾಕೇಜ್ ಘೋಷಿಸಿ ಎಂದು ಕೇಳಿದ್ದಾರೆ.
ಮುಖ್ಯಮಂತ್ರಿಗಳು ಯಾವ ಕ್ರಮ ಬೇಕಾದ್ರೂ ತೆಗೆದುಕೊಳ್ಳಲಿ. ಲಾಕ್ ಡೌನ್ ಅನ್ನೋ ಪದ ಬಿಟ್ಟು ಬಿಗಿ ಕ್ರಮ ಎಂದಿದ್ದಾರೆ. ಈ ಮೂಲಕ ಪರಿಸ್ಥಿತಿ ಕೈ ಮೀರಿದೆ ಎಂದು ತಾವೇ ಒಪ್ಪಿಕೊಂಡಿದ್ದಾರೆ. ಇನ್ನು ಕರೋನಾ ಸೋಂಕಿತರ ಹಾಗೂ ಮೃತರ ಅಂಕಿ ಸಂಖ್ಯೆಯಲ್ಲಿ ತಪ್ಪಿದೆ ಎಂದು ಕಿಡಿ ಕಾರಿದ್ದಾರೆ.