ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು

344

ಪ್ರಜಾಸ್ತ್ರ ಸುದ್ದಿ

ತುಮಕೂರು: ತಾಯಿ ಬೇಡ ಎಂದರೂ ಕೇಳದೆ ಈಜಲು ಹೋದ ಬಾಲಕನೊಬ್ಬ ಮೃತಪಟ್ಟ ಘಟನೆ ಕೊರಟಗೆರಿ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ತರುಣ ಕಲ್ಯಾಣಿಯಲ್ಲಿ ಮುಳುಗಿ ಮೃತಪಟ್ಟ ಬಾಲಕ.

ಹುಳಿಯಾರು ಹೋಬಳಿಯ ಲಕ್ಕೇನಹಳ್ಳಿ ಗ್ರಾಮದ ವೀರನಾಗಪ್ಪ ಕುಟುಂಬಸ್ಥರೊಂದಿಗೆ ವೀರನಾಗಮ್ಮದೇವಿಯ ದರ್ಶನಕ್ಕೆ ಬಂದಿದ್ದಾರೆ. ಗಂಗಾಪೂಜೆ ಮುಗಿಸಿಕೊಂಡು ವಾಪಸ್ ಹೋಗುವಾಗ ಬಾಲಕ ಈಜಲು ಹೋಗಿ ಈ ದುರ್ಘಟನೆ ಸಂಭವಿಸಿದೆ.

ಅಗ್ನಿಶಾಮಕ ಸಿಬ್ಬಂದಿ ಬಂದು ಮೃತದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು




Leave a Reply

Your email address will not be published. Required fields are marked *

error: Content is protected !!