ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಚುನಾವಣೆ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಿಂದ ಪಾಠ ಮಾಡಲು ಹೋದ, ಕಲ್ಯಾಣ ಕರ್ನಾಟಕ ಭಾಗದ 145 ಶಿಕ್ಷಕರು ಕರೋನಾದಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗ್ತಿಲ್ಲವೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೃತಪಟ್ಟ ಎಲ್ಲ ಶಿಕ್ಷಕರನ್ನ ಕರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ 50 ಲಕ್ಷ ರೂಪಾಯಿ ಪರಿಹಾರವನ್ನ ಅವರ ಕುಟುಂಬಸ್ಥರಿಗೆ ನೀಡಬೇಕು ಎಂದು ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.