ಪ್ರಜಾಸ್ತ್ರ ಸುದ್ದಿ
ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಸಭಾಧ್ಯಕ್ಷ ಕುಲದೀಪ್ ಸಿಂಗ್, 15 ಬಿಜೆಪಿ ಶಾಸಕರು ಅಮಾನತುಗೊಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಸೇರಿ 15 ಶಾಸಕರನ್ನು ಅಮಾನತುಗೊಳಿಸಲಾಗಿದೆ.
ಸದನದಲ್ಲಿ ದುರ್ವತನೆ ಹಾಗೂ ಘೋಷಣೆ ಕೂಗಿದ್ದಕ್ಕಾಗಿ ಶಾಸಕರನ್ನು ಅಮಾನತುಗೊಳಿಸಲಾಗಿದೆ ಎಂದು ಸಭಾಧ್ಯಕ್ಷರು ತಿಳಿಸಿದ್ದಾರೆ. ಇದನ್ನು ಖಂಡಿಸಿರುವ ಬಿಜೆಪಿ ಶಾಸಕರು, ಬಜೆಟ್ ಅಂಗೀಕರಿಸಲು ಸ್ಪೀಕರ್ ಈ ರೀತಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.