ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ: ಸಿಎಂ ಬೊಮ್ಮಾಯಿ

137

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಹಾವಳಿ ಇನ್ನು ಕಡಿಮೆಯಾಗಿಲ್ಲ. ಇದರಿಂದಾಗಿ ಜನರು ಆತಂಕದಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಬೊಮ್ಮಾಯಿ, ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಚಿರತೆಗಳನ್ನು ಪತ್ತೆ ಹೆಚ್ಚಿ ಅವುಗಳನ್ನು ಹಿಡಿದು ಕಾಡಿಗೆ ಬಿಡುವ ಕಾರ್ಯಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ನೀಡುವ ಪರಿಹಾರದಂತೆ ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೂ ಪರಿಹಾರ ನೀಡಲಾಗುವುದು ಅಂತಾ ಹೇಳಿದರು.

ಇನ್ನು ಚಿರತೆಗಳ ಸೆರೆಗಾಗಿ ಬೆಂಗಳೂರು, ಮೈಸೂರು ಕಾರಿಡಾರ್ ಸುತ್ತಮುತ್ತ ವಿಶೇಷ ತಂಡ ರಚನೆ ಮಾಡಲಾಗಿದೆ. ಚಿರತೆ ನಗರಕ್ಕೆ ಎಂಟ್ರಿ ಕೊಟ್ಟಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರು ಹೊರ ಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.




Leave a Reply

Your email address will not be published. Required fields are marked *

error: Content is protected !!