ಗಮನ ಬೇರೆಡೆ ಸೆಳೆದು 18 ಲಕ್ಷ ರೂಪಾಯಿ ಕಳ್ಳತನ

201

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಕಾರು ಚಾಲಕನ ಗಮನ ಬೇರೆಡೆ ಸೆಳದು 18 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಕರ್ನಾಟಕ ಬ್ಯಾಂಕ್ ಹತ್ತಿರ ನಡೆದಿದೆ. ಅಡತಿ ವ್ಯಾಪಾರಿ ಸಿದ್ದಾರಾಮ ಕಾಪ್ಸೆ ಎಂಬುವರ ಹಣ ಕಳ್ಳತನಗೈದು ಪರಾರಿಯಾಗಿದ್ದಾರೆ.

ಕಾರಿನ ಬೋನಟ್ ಮೇಲೆ ಆಯಿಲ್ ಹಾಕಿ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡಿದ್ದಾರೆ. ಬೈಕ್ ಮೇಲೆ ಬಂದಿದ್ದ ಮೂವರಿಂದ ಕೃತ್ಯ ನಡೆದಿದೆ.
ಬ್ಯಾಂಕ್ ನಿಂದ ಹಣ ಪಡೆದು ಕಾರಿನಲ್ಲಿ ಬ್ಯಾಗ್ ಇಟ್ಟಿದ್ದರು.
ಬ್ಯಾಗ್ ಸಮೇತ 18 ಲಕ್ಷ ರೂಪಾಯಿ ಎಗರಿಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!