ನವದೆಹಲಿ: ಕಾಂಗ್ರೆಸ್ ಮಾಜಿ ನಾಯಕ ಸಜ್ಜನಕುಮಾರ ಜಾಮೀನು ಅರ್ಜಿ ವಿಚಾರಣೆಯನ್ನ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯವಾದಿ ಶೇಖರ ನಫಡೆ ಸಲ್ಲಿಸಿರುವ ಅರ್ಜಿಯ ಸಂಬಂಧ, ಶೀಘ್ರವಾಗಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ರಂಜನ ಗೊಗೊಯ್ ತಿಳಿಸಿದ್ದಾರೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು ಜೈಲಿನಲ್ಲಿದ್ದಾರೆ. ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗಿದ್ರು. ವಿಚಾರಣೆ ಬಾಕಿಯಿರುವ ಕಾರಣ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ನಡೆದ ಬೆನ್ನೆಲ್ಲೆ ನವೆಂಬರ್ 1 ಮತ್ತು 2ರಂದು ದೆಹಲಿಯ ಕೆಲವು ಕಡೆ ಸಿಖ್ ವಿರೋಧಿ ಗಲಭೆ ನಡೆದಿತ್ತು. ಈ ಗಲಭೆ ಹಿಂದಿನ ಪಿತೂರಿಯ ಆರೋಪ ಸಜ್ಜನಕುಮಾರ ಮೇಲಿದೆ.