ಪ್ರಜಾಸ್ತ್ರ ಸುದ್ದಿ
ಬುಲ್ದಾನ್: ಎರಡು ಖಾಸಗಿ ಬಸ್ ಗಳ ನಡುವೆ ಶನಿವಾರ ನಸುಕಿನಜಾವ 3 ಗಂಟೆಯ ಸಮಯದಲ್ಲಿ ಅಪಘಾತ ಸಂಭವಿಸಿದೆ. ಇದರಿಂದಾಗಿ 6 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ-ನಾಗ್ಪುರ ಹೆದ್ದಾರಿಯ ಮಲ್ಕಾಪುರ ಹತ್ತಿರದ ಫ್ಲೈಓವರ್ ಬಳಿ ಅಪಘಾತ ನಡೆದಿದೆ.
ನಾಗ್ಪುರದಿಂದ ನಾಸಿಕ್ ಕಡೆ ಹೊರಟಿದ್ದ ಬಸ್ ಹಾಗೂ ಅಮರಾನಥ ತೀರ್ಥಯಾತ್ರೆಯಿಂದ ವಾಪಸ್ ಹಿಂಗೋಲಿಗೆ ಹೊರಟಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದೆ. ಘಟನೆಯಲ್ಲಿ 6 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಬಸ್ ಗಳು ಸಂಪೂರ್ಣ ಜಖಂಗೊಂಡಿವೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ರಕ್ಷಣಾ ಕಾರ್ಯ ನಡೆಸಿದರು. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬುಲ್ದಾನಕ್ಕೆ ಕಳಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೃತಪಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.