ಪ್ರಜಾಸ್ತ್ರ ಸುದ್ದಿ
ಸಿಂದಗಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪಟ್ಟಣದ ಸಿ.ಎಂ ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ, ನವೆಂಬರ್ 17 ಹಾಗೂ 18ರಂದು ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಡಾ.ಬಿ.ಜಿ ಪಾಟೀಲ ಹೇಳಿದ್ದಾರೆ.
ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ ಸೇರಿ ನಾಲ್ಕು ವಲಯದಲ್ಲಿ ಪುರುಷ ಹಾಗೂ ಮಹಿಳಾ ಕುಸ್ತಿ ಪಂದ್ಯಾವಳಿ ನಡೆಯಲಿದೆ. 55 ಕೆಜಿ ವಿಭಾಗದಿಂದ 120 ಕೆಜಿ ವಿಭಾಗದವರೆಗೆ ಸುಮಾರು 150ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ಶಾಸಕ ಅಶೋಕ ಮನಗೂಳಿ ಉದ್ಘಾಟಿಸಲಿದ್ದಾರೆ. ವಿಶ್ವವಿದ್ಯಾಲಯದ ದೈಹಿಕ ನಿರ್ದೇಶಕರು ಸೇರಿ ಇತರರು ಭಾಗವಹಿಸಲಿದ್ದಾರೆ ಅಂತಾ ತಿಳಿಸಿದರು.
ಈ ವೇಳೆ ದೈಹಿಕ ನಿರ್ದೇಶಕ, ಕ್ರೀಡಾ ಕೂಟದ ಸಂಘಟನಾ ಕಾರ್ಯದರ್ಶಿ ಡಾ.ಅಂಬರೀಶ ಬಿರಾದಾರ, ಕೆ.ಹೆಚ್ ಸೋಮಾಪುರ, ಜಿ.ಜಿ ಕಾಂಬಳೆ, ಎಸ್.ಎ ಜಾಹಗೀರದಾರ, ಎಸ್.ಎಂ ಬಿರಾದಾರ, ಎಸ್.ಹೆಚ್ ಹೂಗಾರ ಸೇರಿ ಇತರರು ಹಾಜರಿದ್ದರು.