ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಕೋವಿಡ್ 19 ಹಾವಳಿಯಿಂದ 50 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದ್ಯಾವ ಪುರುಷಾರ್ಥಕ್ಕೆ 100 ಕೋಟಿ ಲಸಿಕೆ ಸಾಧನೆ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಸರ್ಕಾರ ಇದುವರೆಗೂ 2 ಡೋಸ್ ಲಸಿಕೆ ನೀಡಿರುವುದು ಕೇವಲ 29 ಕೋಟಿ ಜನರಿಗೆ ಮಾತ್ರ. ಆದರೆ, 100 ಕೋಟಿ ಜನರಿಗೆ ಲಸಿಕೆ ಕೊಟ್ಟಿದ್ದೇವೆ ಎಂದು ಜನರಿಗೆ ಸುಳ್ಳು ಹೇಳಿ ಮೋಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಅನ್ನೋದು ಹಾಸ್ಯಸ್ಪದವಾಗಿದೆ ಎಂದರು.