‘ದ.ಕ’ದಲ್ಲಿ ಆ.1ರ ತನಕ ಸಂಜೆ 6ಗಂಟೆಗೆ ಅಂಗಡಿಗಳು ಬಂದ್

173

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಕಳೆದ ಎರಡು ವಾರಗಳಲ್ಲಿ ಮೂರು ಕೊಲೆಗಳು ನಡೆದ ಹಿನ್ನೆಲೆಯಲ್ಲಿ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರವೀಣ್ ಹಾಗೂ ಫಾಜಿಲ್ ಹತ್ಯೆಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳು ಹೊಸ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 1ರ ತನಕ ಗ್ರಾಮೀಣ ಹಾಗೂ ನಗರ ಪ್ರದೇಶದ ಅಂಗಡಿ ಮುಂಗಟ್ಟುಗಳು ಸಂಜೆ 6ರೊಳಗೆ ಬಂದ್ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ. ಆಸ್ಪತ್ರೆ, ಮೆಡಿಕಲ್ ಸೇರಿ ತುರ್ತು ಸೇವೆಗಳು ಹೊರತು ಪಡಿಸಿ ಎಲ್ಲವೂ ಸಂಜೆ 6ಗಂಟೆಯೊಳಗೆ ಬಂದ್ ಮಾಡಬೇಕು. ಸ್ಥಳೀಯ ಆಡಳಿತ ಅಂಗಡಿಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!