ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದ್ರೆ, ಬೆಳಗ್ಗೆ 4ಗಂಟೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದಾರೆ. ಹೀಗಾಗಿ ಎಲ್ಲೋ ಒಂದ್ಕಡೆ ಲಾಕ್ ಡೌನ್ ವಿಫಲವಾಗ್ತಿದೆ ಅನ್ನೋ ಅನುಮಾನ ಮೂಡಿದೆ.
ಈ ಬಗ್ಗೆ ಮಾತ್ನಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ 2 ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಅದನ್ನ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಹೇಳಿದ್ದಾರೆ. ಆಂಧ್ರ, ದೆಹಲಿಯಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಿರುವುದ್ರಿಂದ ಸೋಂಕು ಕಡಿಮೆಯಾಗ್ತಿದೆ ಅಂತಾ ಹೇಳಿದ್ರು.
ಇನ್ನು ರಾಜ್ಯದಲ್ಲಿ ಇಂದಿನಿಂದ ಕಡುಬಡವರಿಗೆ ಫುಡ್ ಕಿಟ್ ವಿತರಣೆ ಮಾಡಲಾಗುವುದು ಅಂತಾ ಹೇಳಿದರು. ಹಸಿವಿನಿಂದ ಯಾರೂ ಇರಬಾರದು ಅನ್ನೋ ಕಾರಣಕ್ಕೆ ಫುಡ್ ಕಿಟ್ ವಿತರಿಸಲಾಗ್ತಿದೆ ಎಂದರು.