ಅಲ್ಲಿ ವಿನಯ್ ಬದಲು ತಮಟಗಾರಗೆ ಟಿಕೆಟ್ ನೀಡಲು ಮನವಿ

718

ಪ್ರಜಾಸ್ತ್ರ ಸುದ್ದಿ

ಧಾರವಾಡ: ಮುಂಬರುವ 2023ರ ವಿಧಾನಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ನಲ್ಲಿ ಈಗಿನಿಂದಲೇ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಕ್ಷೇತ್ರದ ವಿಚಾರದಲ್ಲಿಯೂ ಮನವಿ ಸಲ್ಲಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷವು ಧಾರವಾಡ ಗ್ರಾಮೀಣ ಕ್ಷೇತ್ರವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗೆ ನೀಡಬೇಕೆಂದು ಮನವಿ ಮಾಡಲಾಗಿದೆ.

ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಧಾರವಾಡ ಗ್ರಾಮೀಣ ಬದಲು ಶಹರ ಕ್ಷೇತ್ರ ನೀಡಬೇಕು. ಗ್ರಾಮೀಣ ಕ್ಷೇತ್ರವನ್ನು ಮೊಹಮ್ಮದ್ ಇಸ್ಮಾಯಿಲ್ ತಮಟಗಾರಿಗೆ ನೀಡಬೇಕೆಂದು ಧಾರವಾಡದ ಅಂಜುಮಾನ್ ಎ ಇಸ್ಲಾಂ ಸಂಸ್ಥೆ ಮನವಿ ಮಾಡಿದೆ. ಮಾಜಿ ಸಚಿವ ಜಮೀರ್ ಅಹ್ಮದ್ ಅವರಿಗೆ ಸಂಸ್ಥೆಯ ಮುಖಂಡರು ಮನವಿ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!