ಮಂಡ್ಯ ಏಳೂ ಕ್ಷೇತ್ರ ಗೆಲ್ಲಲು ಕೈ ಪ್ಲಾನ್!

248

ಪ್ರಜಾಸ್ತ್ರ ಸುದ್ದಿ

ಮಂಡ್ಯ: 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಚಟುವಟಿಕೆಗಳು ಜೋರಾಗಿವೆ. ಈ ಬಾರಿ ಮಂಡ್ಯ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ. ಹೀಗಾಗಿ ಗೌಪ್ಯ ಸಭೆಗಳನ್ನು ನಡೆಸುತ್ತಿದೆ. ಹೀಗಾಗಿ ಎಲ್ಲ ಕಡೆ ಬಲಿಷ್ಠ ಅಭ್ಯರ್ಥಿಗಳನ್ನು ನಿಲ್ಲಿಸಲು ಸಜ್ಜಾಗುತ್ತಿದೆ.

ಮದ್ದೂರಿಗೆ ಗುರುಚರಣ್ ಅಭ್ಯರ್ಥಿ ಎನ್ನುತ್ತಿದ್ದ ಕಾಂಗ್ರೆಸ್, ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಮ್ಮ ಟಿಕೆಟ್ ಮಾರಾಟಕ್ಕೆ ಇಲ್ಲ ಎಂದಿದ್ದರು. ಅಭ್ಯರ್ಥಿ ಯಾರೆಂದು ಹೇಳಿ ಗೊಂದಲಕ್ಕೆ ತೆರೆ ಎಳೆಯಿರಿ ಎಂದು ಕೂಗಾಟ ನಡೆಸಿದ್ದರು. ಇವೆಲ್ಲ ಆಟ ಬಿಟ್ಬುಡಿ. ಮೊದಲು ಪಕ್ಷದ ಕೆಲಸ ಮಾಡಿ. ನಾನೇ ಅಭ್ಯರ್ಥಿ ಎಂದು ಕ್ಲಾಸ್ ತೆಗೆದುಕೊಂಡಿದ್ದರು.

ಈಗ ಕದಲೂರು ಉದಯ್ ಜೊತೆಗೆ ಗೌಪ್ಯ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ಕೂಡಿಕೊಂಡು ಮಾತುಕತೆ ನಡೆಸಿದ್ದು, ಕದಲೂರು ಉದಯರನ್ನು ಕಾಂಗ್ರೆಸ್ ಗೆ ಕರೆತಂದು ಅಭ್ಯರ್ಥಿ ಮಾಡಬೇಕು ಅನ್ನೋ ಚರ್ಚೆ ನಡೆದಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಶೀಘ್ರದಲ್ಲಿ ಇದಕ್ಕೆ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!