ಕರ್ನಾಟಕದಲ್ಲಿ 21 ದಿನ ಭಾರತ ಬೆಸೆಯುವ ಯಾತ್ರೆ

188

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ ಬೆಸೆಯುವ (ಜೋಡೋ) ಯಾತ್ರೆ ನಡೆಸಲಾಗುತ್ತಿದೆ. ಇದು ಕರ್ನಾಟಕದಲ್ಲಿ 21 ದಿನಗಳ ಕಾಲ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

21 ದಿನಗಳ ಕಾಲ 8 ಜಿಲ್ಲೆ 511 ಕಿಲೋ ಮೀಟರ್ ಯಾತ್ರೆ ನಡೆಯಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಿಗೆ ಹೋಗಿ ನಾನೇ ಪರಿಶೀಲನೆ ನಡೆಸಿದ್ದೇನೆ. ಬಳ್ಳಾರಿಗೆ ಭೇಟಿ ನೀಡಲಿದ್ದೇನೆ. ಪ್ರತಿ ದಿನ ಎಷ್ಟು ಕಿಲೋ ಮೀಟರ್ ಸಂಚರಿಸಬೇಕು. ಎಲ್ಲಿ ಕಾರ್ಯಕ್ರಮ ಮಾಡಬೇಕು ಅನ್ನೋದು ದೆಹಲಿ ನಾಯಕರು ನಿರ್ಧರಿಸಲಿದ್ದಾರೆ ಎಂದರು.




Leave a Reply

Your email address will not be published. Required fields are marked *

error: Content is protected !!