ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಸಚಿವ ಮುರುಗೇಶ ನಿರಾಣಿ ಅವರ ಫೋಟೋ ಇರುವ 21.45 ಲಕ್ಷ ಮೌಲ್ಯದ ಬೆಳ್ಳಿ ಹಣತೆಯನ್ನು ಫ್ಲೈಯಿಂಗ್ ಸ್ವ್ಕಾಡ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಬೆಳ್ಳಿ ಹಣತೆಯನ್ನು ವಶಕ್ಕೆ ಪಡೆದಿದ್ದಾರೆ.
ಸಚಿವ ನಿರಾಣಿ ಅವರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಯ ಸಿಬ್ಬಂದಿ ವಸತಿ ಗೃಹದ ಮೇಲೆ ದಾಳಿ ನಡೆಸಿದಾಗ, ಮತದಾರರಿಗೆ ಹಂಚಲು ತಂದಿದ್ದ ಬೆಳ್ಳಿ ಹಣತೆಗಳನ್ನು ವಶಕ್ಕೆ ಪಡೆಯಲಾಗಿದೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.