ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಗಳ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ.
ಆರ್ ಟಿಐ ಕಾರ್ಯಕರ್ತ ಬಿ.ಎಚ್ ಗೌಡ್ರು ಎಂಬುವವರು ಈ ಒಂದು ಗಂಭೀರ ಆರೋಪ ಮಾಡಿದ್ದು, 14 ಹೆಣ್ಣು ಮಕ್ಕಳು, 8 ಗಂಡು ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಿವ್ಯಪ್ರಭು ಹಾಗೂ ಎಸ್ಪಿ ಕೆ.ಪರಶುರಾಮ್ ಅವರಿಗೆ ಮನವಿ ಸಲ್ಲಿಸಲಾಗಿದೆಯಂತೆ.