ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆಕ್ಸಿಜನ್ ಸಮಸ್ಯೆಯಿಂದ 24 ಗಂಟೆಯಲ್ಲಿ 24 ಜನರು ಚಾಮರಾಜನಗರದಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದ್ದಾರೆ. ಸರ್ಕಾರದ ಬೇಜವಾಬ್ದಾರಿಯಿಂದ ಜನರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎಂದಿದ್ದಾರೆ.
ಸರ್ಕಾರಕ್ಕೆ ಆಕ್ಸಿಜನ್ ಪೂರೈಕೆ ಮಾಡಲು ಆಗದ ಸ್ಥಿತಿ ಬಂದಿದೆ. ಬಿಜೆಪಿ ನಾಯಕರಿಗೆ ಪ್ರಚಾರ ಹೊರತು ಜನರ ಜೀವಗಳು ಮುಖ್ಯವಲ್ಲ. ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಜವಾಬ್ದಾರಿಯನ್ನ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.