ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಿದ 24 ಸಚಿವರು

134

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಆರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆಗೆ 8 ನಾಯಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ.ಹೆಚ್.ಸಿ ಮಹಾದೇವಪ್ಪ, ಈಶ್ವರ ಖಂಡ್ರೆ, ಕೃಷ್ಣ ಬೈರೇಗೌಡ, ಕೆ.ಎನ್ ರಾಜಣ್ಣ, ಹೆಚ್.ಕೆ ಪಾಟೀಲ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಆರ್.ಬಿ ತಿಮ್ಮಾಪುರ, ಎಸ್.ಎಸ್ ಮಲ್ಲಿಕಾರ್ಜುನ್, ಡಾ.ಶರಣಪ್ರಕಾಶ್ ಪಾಟೀಲ, ಶಿವರಾಜ್ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್, ಮಂಕಾಳ ವೈದ್ಯ, ರಹೀಂ ಖಾನ್, ಸಂತೋಷ್ ಲಾಡ್, ಡಿ.ಸುಧಾಕರ್, ಎನ್.ಎಸ್ ಬೋಸರಾಜ್, ಶಿವಾನಂದ ಪಾಟೀಲ, ಕೆ.ವೆಂಕಟೇಶ್, ಚೆಲುವರಾಯಸ್ವಾಮಿ, ಭೈರತಿ ಸುರೇಶ್, ಮಧು ಬಂಗಾರಪ್ಪ, ಬಿ.ನಾಗೇಂದ್ರ ಹಾಗೂ ಡಾ.ಎಂ.ಸಿ ಸುಧಾಕರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಸರಳವಾಗಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!