ಪ್ರಜಾಸ್ತ್ರ ಸುದ್ದಿ
ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ ವರ್ಷಕ್ಕೆ 24 ಟಿಎಂಸಿ ನೀರು ಮೀಸಲು ಇಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿಗೆ ನೀರು ಮೀಸಲು ಇಡುವ ಕುರಿತು ಸುಪ್ರಿಂ ಕೋರ್ಟ್ ಅನುಮತಿ ಪಡೆಯಲಾಗಿದೆ. ಮುಂದಿನ ವಾರ ಮೇಕೆದಾಟ ಯೋಜನೆ ವಿಚಾರ ಚರ್ಚೆಗೆ ಬರಲಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ವಿಚಾರ ಪ್ರಸ್ತಾಪಿಸಲಾಗಿದೆ. ಬೆಂಗಳೂರಿಗರು ಚಿಂತಿಸಬೇಕಿಲ್ಲ ಎಂದು ದೆಹಲಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.