ಪ್ರಜಾಸ್ತ್ರ ಸುದ್ದಿ
ನವದೆಹಲಿ: ನಮ್ಮ ಸರ್ಕಾರವನ್ನು ಬಿಳಿಸಲು ಬಿಜೆಪಿ ಸಂಚು ರೂಪಿಸಿದೆ. ಹೀಗಾಗಿ 10 ಆಪ್ ಶಾಸಕರಿಗೆ ತಲಾ 25 ಕೋಟಿ ರೂಪಾಯಿ ನೀಡುವ ಆಮಿಷ ಒಡ್ಡಿದೆ ಎಂದು ಆಪ್ ಶಾಸಕ ರಿತುರಾಜ್ ಝಾ ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಭಾನುವಾರ ಭಾಗಿಯಾಗಿದ್ದೆ. ಇದೇ ವೇಳೆ ಬಿಜೆಪಿ ನಾಯಕರೊಬ್ಬರು ಫೋನ್ ಮಾಡಿದ್ದರು. ಇಷ್ಟೇ ಅಲ್ಲ ಮೂರ್ನಾಲ್ಕು ದಿನಗಳಿಂದಲೂ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ.
ನಾನು ಒಂದು ವೇಳೆ 10 ಶಾಸಕರನ್ನು ಕರೆದುಕೊಂಡು ಬಂದರೆ ತಲಾ 25 ಕೋಟಿ ರೂಪಾಯಿ, ಸಚಿವ ಸ್ಥಾನದ ಆಮಿಷ ಒಡ್ಡಿದ್ದಾರೆ. ನಾವು ಪಕ್ಷ ಬಿಡುವುದಿಲ್ಲ. ಸಿಎಂ ಕೇಜ್ರಿವಾಲ್ ಜೈಲಿನಲ್ಲಿರುವ ಕಾರಣ ಸರ್ಕಾರ ಬೀಳಿಸಲು ನೋಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.