ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಆಗಿತ್ತು. ಇದೀಗ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಮತ್ತೆ ಅನ್ಯಾಯವಾಗಿದೆ. ಈ ಮೂಲಕ ಬಿಜೆಪಿ ನಾಯಕರು ಹಿಂದೂಳಿದ ಕ್ಷೇತ್ರಗಳ ಶಾಸಕರಿಗೆ ಪದೆಪದೆ ಅನ್ಯಾಯ ಮಾಡುತ್ತಿದ್ದಾರೆ ಅನ್ನೋ ಆಕ್ರೋಶ ವ್ಯಕ್ತವಾಗಿದೆ.
ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ ಸೇರಿದಂತೆ 7 ಜಿಲ್ಲೆಗಳ 41 ವಿಧಾನ ಕ್ಷೇತ್ರಗಳಲ್ಲಿ 18 ಬಿಜೆಪಿ ಶಾಸಕರಿದ್ದಾರೆ. ಆದ್ರೆ, ಕೊಪ್ಪಳ, ಹೊಸಪೇಟೆ ಭಾಗದ ಒಬ್ಬೊಬ್ಬ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟ ರಚನೆಯ ವಿಚಾರದಲ್ಲಿ ದತ್ತಾತ್ರೇಯ ಪಾಟೀಲ ರೇವೂರ, ರಾಜುಗೌಡ ಸಾಕಷ್ಟು ಕೇಳಿ ಬಂದಿತ್ತು. ಆದ್ರೆ, ಅವರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಈ ಭಾಗದ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.