ಪುನರಾವರ್ತಿತ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ?

271

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಿಯುಸಿ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ರಾಮಾಯಣ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆ ತೆಗೆದುಕೊಳ್ಳುವ ಒಂದೊಂದು ನಿರ್ಧಾರಗಳಿಂದ ವಿದ್ಯಾರ್ಥಿಗಳು, ಪೋಷಕರು ಕಂಗಾಲಾಗಿದ್ದಾರೆ.

ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶಕುಮಾರ ಹೇಳಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಹೀಗಿರುವಾಗಿ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತೆ ಅನ್ನೋ ಸುದ್ದಿ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಹೌದು, ಫ್ರೆಶರ್ಸ್ ವಿದ್ಯಾರ್ಥಿಗಳನ್ನ ಪಾಸ್ ಮಾಡುವುದು, ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತೆ ಎನ್ನಲಾಗ್ತಿದೆ. ಈ ಅವೈಜ್ಞಾನಿಕ ನಿರ್ಧಾರಕ್ಕೆ ಶಿಕ್ಷಣ ಇಲಾಖೆಯಲ್ಲಿಯೇ ವಿರೋಧ ವ್ಯಕ್ತವಾಗಿದೆ, ಪೋಷಕರು, ವಿದ್ಯಾರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ. 76,387 ಸರ್ಕಾರಿ ಹಾಗೂ 17,477 ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪುನರಾವರ್ತಿತ ಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶಕುಮಾರ ಅವರ ಈ ವಿಚಿತ್ರ ನಿರ್ಧಾರಗಳು ಎಲ್ಲರ ಆಕ್ರೋಶ ಕಾರಣವಾಗಿದೆ. ಮೇಲೆಂದ ಮೇಲೆ ಇಷ್ಟೊಂದು ತಪ್ಪುಗಳನ್ನ ಯಾಕೆ ಮಾಡ್ತಿದ್ದಾರೆ, ಇದು ಯಾವ ರೀತಿಯ ನ್ಯಾಯ ಎಂದು ಜನ ಪ್ರಶ್ನಿಸ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!