ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯಾದ್ಯಂತ ಈಗಾಗ್ಲೇ ವಾರ್ಷಿಕ ಪರೀಕ್ಷೆಗಳು ಶುರುವಾಗಿವೆ. ಎಸ್ಎಸ್ಎಲ್ ಸಿ, ಪ್ರಥಮ ಪಿಯುಸಿ ಪರೀಕ್ಷೆಗಳು ನಡೆಯುತ್ತಿವೆ. ಈ ವೇಳೆ ಹಿಜಾಬ್ ಧರಿಸಿ ಬಂದವರಿಗೆ ಅವಕಾಶ ನಿರಾಕರಿಸಲಾಗಿದೆ. ಅದೆ ರೀತಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯೂ ಹಿಜಾಬ್ ಗೆ ಅವಕಾಶವಿಲ್ಲವೆಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶ ಪಾಲಿಸಬೇಕು. ರಾಜ್ಯದ ಶೇಕಡ 90 ಕಾಲೇಜುಗಳಲ್ಲಿ ಸಮವಸ್ತ್ರ ಇವೆ. ಶೇಕಡ 10ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರವಿಲ್ಲ. ಹೀಗಾಗಿ ಏಪ್ರಿಲ್ 22ರಿಂದ ಮೇ 18ರ ತನಕ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಸಹ ಹಿಜಾಬ್ ಧರಿಸಿದವರಿಗೆ ಪ್ರವೇಶವಿಲ್ಲವೆಂದು ತಿಳಿಸಲಾಗಿದೆ.