ಪ್ರಜಾಸ್ತ್ರ ಸುದ್ದಿ
ಸಿಂದಗಿ: ಮಾರ್ಚ್ 9ರಿಂದ 29ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ. ತಾಲೂಕಿನ ವ್ಯಾಪ್ತಿಗೆ ಬರುವ ಸಿಂದಗಿ, ದೇವರ ಹಿಪ್ಪರಗಿ, ಆಲಮೇಲ ಭಾಗದ ಕಾಲೇಜುಗಳ ಪ್ರಾಚಾರ್ಯರು, ಮುಖ್ಯ ಅಧೀಕ್ಷಕರುಗಳ ಪಿಯುಸಿ ಪರೀಕ್ಷಾ ಪೂರ್ವಭಾವಿ ಸಭೆ, ಪಟ್ಟಣದ ಆರ್.ಡಿ ಪಾಟೀಲ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಪ್ರತಿನಿಧಿ ಸಿ.ಕೆ.ಹೊಸಮನಿ ಮಾತನಾಡಿ, ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಾಠ ಭೋದನೆ ಮಾಡಿ ಮಕ್ಕಳ ಗುಣಮಟ್ಟವನ್ನು ಹೆಚ್ಚಿಸಿದ್ದಿರಿ. ಅದು ಅನಾವರಣಗೊಳ್ಳುವ ಹಂತಕ್ಕೆ ಬಂದಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆಗಳನ್ನು ಬರೆಯಬೇಕು. ನಕಲು ಮುಕ್ತ ಪರೀಕ್ಷೆ ನಡೆಯಬೇಕು ಎಂದು ಹೇಳಿದರು.
ಈ ವೇಳೆ ಕೆ.ಎ ಉಪ್ಪಾರ, ವಿಮಲಕಾಂತ ಪಾಟೀಲ, ಬಿ.ಎಂ ಸಿಂಗನಳ್ಳಿ ಸೇರಿದಂತೆ ಮುಖ್ಯ ಅಧೀಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.