ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹರಿದಾಡುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾತನಾಡಿ, ಜೂನ್ 16ರಂದು ಫಲಿತಾಂಶ ಪ್ರಕಟವಾಗುವುದಿಲ್ಲ. ಫಲಿತಾಂಶದ ಬಗ್ಗೆ ನಾನೇ ಪ್ರಕಟಿಸುತ್ತೇನೆ ಎಂದಿದ್ದಾರೆ.
ಜೂನ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸುಳ್ಳು ಸುದ್ದಿಗಳ ಬಗ್ಗೆ ಗಮನಹರಿಸಬೇಡಿ. ನಾನೇ ಮಾಧ್ಯಮಗಳ ಮುಂದೆ ಬಂದು ಫಲಿತಾಂಶ ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.