ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದಿಂದಾಗಿ ಎಲ್ಲೆಡೆ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಸ್ಥರು, ಬಂಧು ಮಿತ್ರರು, ಅಭಿಮಾನಿಗಳ ಕಣ್ಣೀರಧಾರೆ ಹರಿಯುತ್ತಿದೆ.
ಪುನೀತ್ ನಿಧನದ ಹಿನ್ನೆಲೆಯಲ್ಲಿ ನಗರದಲ್ಲಿ ಮೂರು ದಿನ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯಿಂದ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಇಂದಿನಿಂದ ತಕ್ಷಣ ಜಾರಿಗೆ ಬರುವಂತೆ ಅಕ್ಟೋಬರ್ 31ರ ಮಧ್ಯರಾತ್ರಿ ತನಕ ನಿಷೇಧ ಹೇರಲಾಗಿದೆ.