ಮೂವರು ಡಿಸಿಎಂ ಚರ್ಚೆಗೆ ತೆರೆ ಎಳೆದ ಎಐಸಿಸಿ ಅಧ್ಯಕ್ಷರು

139

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ರಾಜ್ಯದಲ್ಲಿ ಹೆಚ್ಚುವರಿಯಾಗಿ ಮೂವರು ಡಿಸಿಎಂಗಳ ನೇಮಕ ವಿಚಾರ ತೀವ್ರ ಚರ್ಚೆಯಲ್ಲಿದೆ. ಹಲವು ಸಚಿವರೇ ಇದನ್ನು ಮಾಧ್ಯಮಗಳ ಎದುರು ಪ್ರಸ್ತಾಪಿಸಿದ್ದಾರೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಈ ಬಗ್ಗೆ ಇಂದು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತೆರೆ ಎಳೆದಿದ್ದಾರೆ.

ರಾಜ್ಯದಲ್ಲಿ ಮೂವರು ಡಿಸಿಎಂಗಳ ನೇಮಕ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಇದು ಊಹಾಪೋಹ ಅಷ್ಟೇ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಇಂತಹ ಚರ್ಚೆಗಳು ಬರಬಾರದು. ಲೋಕಸಭಾ ಚುನಾಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ದೆಹಲಿಯಲ್ಲಿ ಸಭೆ ಕರೆದಿದ್ದೇವೆ ಎಂದರು.




Leave a Reply

Your email address will not be published. Required fields are marked *

error: Content is protected !!