ಬ್ರೇಕಿಂಗ್ ನ್ಯೂಸ್
ಹಾಸನ: ಚನ್ನರಾಯಪಟ್ಟಣ ತಾಲೂಕಿನ ಅಗಸರಹಳ್ಳಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.
ಗ್ರಾಮದ ಭಾಗ್ಯಮ್ಮ, ದಾಕ್ಷಾಯಿಣಿ ಹಾಗೂ ದಯಾನಂದ ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಇನ್ನು ಮಗುವೊಂದರ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆದಿದೆ.
ಸಾಂದರ್ಭಿಕ ಚಿತ್ರ