ಪ್ರಜಾಸ್ತ್ರ ಸುದ್ದಿ
ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಟಿ.ನರಸೀಪುರ ತಾಲೂಕಿನ ಸೀಲಸೋಗೆ ಗ್ರಾಮದಲ್ಲಿ ನಡೆದಿದೆ. ರಾಚೇಗೌಡ(60), ಹರೀಶ್(32) ಹಾಗೂ ಮಹಾದೇವಸ್ವಾಮಿ(38) ಮೃತರೆಂದು ಗುರುತಿಸಲಾಗಿದೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಈ ದುರಂತ ಸಂಭವಿಸಿದೆಯಂತೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.