ಪ್ರಜಾಸ್ತ್ರ ಅಪರಾಧ ಸುದ್ದಿ
ರಾಯಚೂರು: ಒಂದು ಕುಟುಂಬದ ಮೂವರನ್ನು ಹತ್ಯೆ ಮಾಡಿರುವ ಘಟನೆ ಹೊರವಲಯದ ಯರಮರಸ್ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಸಂತೋಷ(45), ವೈಷ್ಣವಿ(25), ಆರತಿ(16) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಯಾರು ಮಾಡಿದ್ದು, ಯಾಕೆ ಮಾಡಿದ್ದು ಅನ್ನೋದರ ತನಿಖೆ ನಡೆಯುತ್ತಿದೆ. ರಾಯಚೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.