ಈಜಲು ಹೋದ ಐವರು ವಿದ್ಯಾರ್ಥಿಗಳಲ್ಲಿ ಮೂವರ ಸಾವು

123

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದಿದ್ದು ವಿದ್ಯಾರ್ಥಿಗಳು ಒಂದಿಷ್ಟು ನಿರಾಳರಾಗಿದ್ದಾರೆ. ಪರೀಕ್ಷೆಯ ಸಲುವಾಗಿ ಇಷ್ಟು ದಿನ ಎಂಜಾಯ್ ಮಾಡಲು ಆಗದೆ ಹೋಗಿದ್ದರು. ಇದೀಗ ಎಂಜಾಯ್ ಮಾಡುತ್ತಿದ್ದಾರೆ. ಆದರೆ, ಕೆಲವರ ಬಾಳಲ್ಲಿ ಮೃತ್ಯುವಾಗಿದೆ. ಹೌದು, ಈಜಲು ಹೋದ ಐವರು ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿನ ಕೆರೆಯಲ್ಲಿ ಈಜಲು ಗ್ರಾಮದ ಸಂಜಯ, ಎಚ್.ಡಿ ಪುರದ ಗಿರೀಶ್, ಗೊಲ್ಲರಹಟ್ಟಿಯ ಮನು ಹೋಗಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೆರೆ ಆಳವಾಗಿದ್ದ ಕಾರಣ ವಿದ್ಯಾರ್ಥಿಗಳಿಗೆ ದಡ ತಲುಪಲು ಆಗಿಲ್ಲ. ಹೀಗಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿಕೊಟ್ಟು ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರು ಆಕ್ರಂದನ ನೋಡಲಾಗದು. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!