ಒಂದೇ ಕುಟುಂಬದ ಮೂವರು ಆತ್ಮಹತ್ಯೆ

191

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಮಹಾದೇವಸ್ವಾಮಿ(42), ಸವಿತಾ(33) ಹಾಗೂ ಮಗಳು ಸಿಂಚನಾ(15) ಮೃತ ದುರ್ದೈವಿಗಳು.

ಆಸ್ತಿ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಡೆತ್ ನೋಟಿನಲ್ಲಿ ಮೃತನ ಅಕ್ಕ, ತಂಗಿಯರ ಹೆಸರು ಇದ್ದು, ಇವರಿಗೆ ಶಿಕ್ಷೆಯಾಗಬೇಕು ಎಂದು ಬರೆಯಲಾಗಿದೆಯಂತೆ.

ಮಹಾದೇವಸ್ವಾಮಿ ಕೃಷಿ ಕೆಲಸ ಮಾಡುತ್ತಿದ್ದು, ಪತ್ನಿ ಟ್ರೇಲರಿಂಗ್ ಮಾಡುತ್ತಿದ್ದರು. ಓರ್ವ ಪುತ್ರಿ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದು, ಅಜ್ಜನ ಮನೆಯಲ್ಲಿದ್ದಾಳೆ. ಕಿರಿಯ ಪುತ್ರಿ 9ನೇ ತರಗತಿ ಇದ್ದು ಹೆತ್ತವರೊಂದಿಗೆ ಇದ್ದಳು. ಮೂವರ ಸಾವು ಇಡೀ ಗ್ರಾಮವನ್ನೇ ಬೆಚ್ಚಿ ಬೀಳಿಸಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!