ಪ್ರಜಾಸ್ತ್ರ ಸುದ್ದಿ
ಕಾಸರಗೋಡು: ಮಂಗಳೂರಿನಿಂದ ಕೇರಳಕ್ಕೆ ಸರ್ಕಾರಿ ಬಸ್ ಮೂಲಕ ದಾಖಲೆಯಿಲ್ಲದ 30 ಲಕ್ಷ ರೂಪಾಯಿ ಸಾಗಿಸುತ್ತಿದ್ದ ಯುವಕನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಮಹಾರಾಷ್ಟ್ರ ಮೂಲದ ಯಶಾದೀಪ್ ಡಬೋಟೆ(21) ಬಂಧಿತ ಯುವಕನಾಗಿದ್ದಾನೆ.
ಚಿನ್ನದ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಂಜೇರಿಗೆ ತೆಗೆದುಕೊಂಡು ಹೋಗಲಾಗುತಿತ್ತು ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ ಯುವಕನನ್ನು ಬಂಧಿಸಲಾಗಿದೆ.