ಬೆಳೆ ಪರಿಹಾರಕ್ಕೆ 300 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

161

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ರಾಜ್ಯದಲ್ಲಿ ಜುಲೈನಿಂದ ಆಗಸ್ಟ್ ತನಕ ಸುರಿದ ಮಳೆಯಿಂದ ಆದ ಬೆಳೆ ಹಾನಿಗೆ ಸಂಬಂಧಿಸಿದಂತೆ ಕಳೆದ ಒಂದು ವಾರದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಪರಿಹಾರ ಬಿಡುಗಡೆ ಮಾಡಲಾಗಿದೆ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ 18.50 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಹಿಂದೆ ಪರಿಹಾರ ನೀಡಲು ವರ್ಷಗಟ್ಟಲೇ ಬೇಕಾಗುತಿತ್ತು. ಈಗ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿದ ಕೂಡಲೇ ರೈತರಿಗೆ ಪರಿಹಾರ ಸಿಗುತ್ತೆ. ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ತಕ್ಷಣ ಪರಿಹಾರ ನೀಡಲಾಗುತ್ತಿದೆ ಎಂದರು.




Leave a Reply

Your email address will not be published. Required fields are marked *

error: Content is protected !!