ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಾಗಿದ್ದ ವರ ಕರೋನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ದೇವರಕೊಡಿಗೆಯಲ್ಲಿ ಇಂದು ಮದುವೆಯಾಗಬೇಕಿದ್ದ 32 ವರ್ಷದ ಪೃಥ್ವಿರಾಜ ಅನ್ನೋ ಯುವ ಸಾವನ್ನಪ್ಪಿದ್ದಾನೆ.
ಕಳೆದ 10 ದಿನಗಳ ಹಿಂದೆ ಬೆಂಗಳೂರಿನಿಂದ ಊರಿಗೆ ಬಂದಿದ್ದ ಪೃಥ್ವಿರಾಜಗೆ ಕರೋನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದ್ರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮದುವೆಯ ಸಂಭ್ರಮ ಇರಬೇಕಾಗಿದ್ದ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.