ಕಲಬುರಗಿ: ಕಲುಷಿತ ನೀರು ಸೇವಿಸಿ 36 ಜನ ಅಸ್ವಸ್ಥರಾಗಿದ್ದಾರೆ. ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಗುಡೂರು ಎಸ್ ಎ ತಾಂಡಾದಲ್ಲಿ ನಿನ್ನ ರಾತ್ರಿ ಈ ಘಟನೆ ನಡೆದಿದೆ. ಇದ್ರಿಂದಾಗಿ ತಾಂಡಾ ನಿವಾಸಿಗಳು ವಾಂತಿಭೇದಿಯಿಂದ ಬಳುತ್ತಿದ್ದಾರೆ.
ಎಲ್ಲ ಅಸ್ವಸ್ಥರನ್ನ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಆಸ್ಪತ್ರೆಗೆ ಭೇಟಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಅತ್ತ ಕಲಬುರಗಿ ಮಹಾನಗರ ಪಾಲಿಕೆ ಕಚೇರಿ ಎದುರು ಕುಡಿಯುವ ನೀರಿಗಾಗಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಕಲಬುರಗಿ ಉತ್ತರ ಮತಕ್ಷೇತ್ರದ ಎಂ.ಬಿ ನಗರ, ಗುಬ್ಬಿ ಕಾಲೋನಿ, ಮಹಬೂಬ್ ನಗರ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಯುವ ಮುಖಂಡ ಚಂದು ಪಾಟೀಲ್ ನೇತೃತ್ವದಲ್ಲಿ ಪಾಲಿಕೆ ಮುಂದೆ ಖಾಲಿ ಕೊಡಗಳನ್ನು ಹಿಡಿದುಕೊಂಡು ಧರಣಿ ನಡೆಸಲಾಗ್ತಿದೆ. ವಿಧಾನಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಸೇರಿದಂತೆ ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದಾರೆ.