ನವದೆಹಲಿ: 370 ವಿಧಿ ರದ್ದು ಮಾಡಿರುವ ಕುರಿತು ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನ ಅಕ್ಟೋಬರ್ 1ರಂದು ಸುಪ್ರೀಂ ಕೋರ್ಟ್ ಶುರು ಮಾಡಲಿದೆ.
ನ್ಯಾಯಮೂರ್ತಿ ಎನ್.ವಿ ರಮಣಮೂರ್ತಿ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಪೀಠ, ಹಲವು ಅರ್ಜಿಗಳ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ ಗೊಗಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠ, ಒಂದು ಭಾಗದ ಅರ್ಜಿಗಳ ವಿಚಾರಣೆ ಶುರು ಮಾಡಿದೆ. ಮುಂದಿನ ವಿಚಾರಣೆಯನ್ನ ಸೆಪ್ಟೆಂಬರ್ 30ಕ್ಕೆ ನಿಗದಿ ಮಾಡಿದೆ.
ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನ ಕೇಂದ್ರ ಸರ್ಕಾರ ರದ್ದು ಮಾಡಿರುವುದಕ್ಕೆ ಪರ-ವಿರೋಧಗಳು ಕೇಳಿ ಬಂದಿವೆ. 370 ವಿಧಿ ರದ್ದು ಮಾಡಿರುವುದನ್ನ ಪ್ರಶ್ನಿಸಿ ಕೆಲವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಗಳನ್ನ ಸಲ್ಲಿಸಿದ್ದಾರೆ.