ಶಾಸಕರ ಕಾರಿನಲ್ಲಿದ್ದ ಲಕ್ಷಾಂತರ ರೂಪಾಯಿ ಕಳ್ಳತನ

384

ಪ್ರಜಾಸ್ತ್ರ ಅಪರಾಧ ಸುದ್ದಿ

ರಾಯಚೂರು: ಹಾಡಹಗಲೇ ಶಾಸಕರ ಐಡಿ ಕಾರ್ಡ್ ಹೊಂದಿರುವ ಕಾರಿನ ಗ್ಲಾಸ್ ಒಡೆದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಲಾಗಿದೆ. ಮಾನ್ವಿ ತಾಲೂಕಿನ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ 4 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಿಜೆಪಿ ಶಾಸಕ ಬಸವರಾಜ ದಡೇಸಗೂರು ಅವರ ಗುರುತಿನ ಚೀಟಿ ಹೊಂದಿರುವ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಖದೀಮರು ಈ ಕೃತ್ಯವೆಸಗಿ ಎಸ್ಕೇಪ್ ಆಗಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!